Nova aliança
A Nova Aliança é o pacto de graça que Deus estabeleceu através de Jesus Cristo. Diferente da antiga, ela é escrita no coração, mediada pelo sangue de Cristo e acessível a todos.
A profecia da Nova Aliança
Jeremias profetizou uma aliança nova em que Deus escreveria sua lei no coração do povo. Essa promessa se cumpriu em Cristo.
ಯೆಹೋವ ದೇವರು ಹೇಳುವುದನ್ನು ಕೇಳಿ:
"ನಾನು ಇಸ್ರಾಯೇಲ್ ವಂಶದವರೊಂದಿಗೂ,
ಯೆಹೂದ ವಂಶದವರೊಂದಿಗೂ
ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
ಈ ಒಡಂಬಡಿಕೆಯು ನಾನು
ಇವರ ಪೂರ್ವಜರನ್ನು ಕೈಹಿಡಿದು
ಈಜಿಪ್ಟ್ ದೇಶದಿಂದ ಕರೆದು ತಂದಾಗ,
ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ.
ನಾನು ಅವರಿಗೆ ಯಜಮಾನನಾಗಿ ಇದ್ದರೂ,
ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ
ಒಡಂಬಡಿಕೆಯು ಹೀಗಿರುವುದು," ಎಂದು ಯೆಹೋವ ದೇವರು ಹೇಳುತ್ತಾರೆ.
"ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು.
ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು,
ಅವರು ನನಗೆ ಪ್ರಜೆಯಾಗಿರುವರು.
ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ
ತನ್ನ ಸಹೋದರನಿಗೂ,
‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ.
ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.
ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ಅವರ ಪಾಪಗಳನ್ನು ಇನ್ನೆಂದಿಗೂ
ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ."
ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.
ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.
ಇಲ್ಲಿ ದೇವರು "ಹೊಸ ಒಡಂಬಡಿಕೆ" ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.
ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.
Selada com sangue
Jesus instituiu a Nova Aliança na Última Ceia: 'Este cálice é a nova aliança no meu sangue.' Seu sacrifício é definitivo e perfeito.
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, "ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ. ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.
ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು. ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ. ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ. ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು. ಹಾಗೆ ಚಿಮುಕಿಸುವಾಗ ಮೋಶೆಯು, "ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ," ಎಂದು ಹೇಳಿದನು.
ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು. ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು. ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.
Reconciliação e vida nova
Pela Nova Aliança somos reconciliados com Deus, trazidos para perto pelo sangue de Cristo e feitos embaixadores da reconciliação.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು. ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ. ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ. ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.
ಕ್ರಿಸ್ತ ಯೇಸುವಿನ ಮೂಲಕ ದೇವರ ಮುಂದೆ ನಮಗೆ ಅಂಥಾ ಭರವಸೆಯು ಇರುವುದರಿಂದ ನಾವು ಹಾಗೆ ಹೇಳುತ್ತಿದ್ದೇವೆ. ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ. ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.
ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ. ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ. ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.
ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.