Orgulho
O orgulho é um dos pecados mais condenados na Bíblia. Deus resiste aos soberbos, mas dá graça aos humildes. A humildade é o caminho da honra verdadeira.
Deus resiste ao soberbo
A soberba precede a ruína e o orgulho antecede a queda. Deus abomina o coração altivo e promete humilhar quem se exalta.
ಗರ್ವದಿಂದ ಭಂಗ,
ಉಬ್ಬಿನಿಂದ ದೊಬ್ಬು.
ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ,
ಅವರಿಗೆ ದಂಡನೆ ಖಂಡಿತ.
ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು,
ಕಟ್ಟಕಡೆಗೆ ಅದು ಮರಣಮಾರ್ಗವೇ.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ;
ಗರ್ವ, ಅಹಂಭಾವ, ದುರ್ಮಾರ್ಗತನ,
ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ,
ದೀನತೆಯಲ್ಲಿ ಸುಜ್ಞಾನ.
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ,
ದೀನತೆಯಲ್ಲಿ ಸುಜ್ಞಾನ.
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು,
ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು,
ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ಭಂಗಕ್ಕೆ ಮೊದಲು ಗರ್ವದ ಹೃದಯ,
ಮಾನಕ್ಕೆ ಮುಂಚೆ ದೀನತೆ.
ಭಂಗಕ್ಕೆ ಮೊದಲು ಗರ್ವದ ಹೃದಯ,
ಮಾನಕ್ಕೆ ಮುಂಚೆ ದೀನತೆ.
ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು;
ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
Humildade como caminho
Humilhai-vos diante do Senhor e Ele vos exaltará. A grandeza no Reino vem pelo serviço humilde, não pela autopromoção.
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, "ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ" ಎಂದು ಧರ್ಮಶಾಸ್ತ್ರವು ಹೇಳುತ್ತದೆ.
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ "ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ." ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು" ಅಂದನು.
ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
Os perigos do orgulho
O orgulho cega, gera contendas e afasta de Deus. A Escritura adverte contra a soberba da vida e a vã glória mundana.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
"ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ." ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ಆತನು ಮತ್ತೆ ಹೇಳಿದ್ದೇನೆಂದರೆ, "ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ."
ಹೆಮ್ಮೆಯ ಫಲವು ಕಲಹವೇ,
ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
ಧನ, ಮಾನ ಮತ್ತು ಜೀವಗಳು
ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
O olhar de Deus
O Senhor não olha como o homem. Ele vê o coração e se agrada dos quebrantados de espírito e dos que tremem diante da sua Palavra.
ಆದರೆ ಯೆಹೋವನು ಸಮುವೇಲನಿಗೆ, "ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ" ಅಂದನು.
"ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ;
ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ.
ದೇವರಾದ ಯೆಹೋವನು ಸರ್ವಜ್ಞನು;
ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು.
ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
ಇಸ್ರಾಯೇಲರ ಅರಸನು ಬಂದ ದೂತರಿಗೆ, "ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ" ಎಂದನು.
ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.