As 10 parábolas mais importantes de Jesus
Jesus ensinou lições profundas por meio de parábolas, histórias curtas e simbólicas que comunicam verdades espirituais. Cada parábola tem um significado especial e atemporal, revelando o caráter de Deus e ensinando como viver como cristãos. Aqui estão 10 das parábolas mais marcantes e suas lições:
1. Parábola do Semeador (Mateus 13:3-9)
ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: "ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು; ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು. ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ."
A parábola do semeador fala sobre a receptividade das pessoas à Palavra de Deus. Cada tipo de solo representa diferentes maneiras de receber e aplicar o Evangelho em nossas vidas. Somente um coração fértil e comprometido pode dar frutos espirituais abundantes.
2. O Bom Samaritano (Lucas 10:25-37)
ಒಳ್ಳೆಯ ಸಮಾರ್ಯದವನ ಕುರಿತು ಸಾಮ್ಯ
ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, "ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?" ಎಂದು ಕೇಳಿದನು.
ಯೇಸು ಅವನಿಗೆ, "ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?" ಎಂದು ಕೇಳಿದರು.
ಅದಕ್ಕೆ ಅವನು ಉತ್ತರವಾಗಿ, " ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’" ಎಂದನು.
ಆಗ ಯೇಸು ಅವನಿಗೆ, "ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ," ಎಂದರು.
ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, "ನನ್ನ ನೆರೆಯವನು ಯಾರು?" ಎಂದು ಕೇಳಿದನು.
ಆಗ ಯೇಸು: "ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು. ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು. ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು. ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು, ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.
"ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?" ಎಂದು ಯೇಸು ಕೇಳಿದರು.
ಅದಕ್ಕೆ ನಿಯಮ ಪಂಡಿತನು, "ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು," ಎಂದನು.
ಆಗ ಯೇಸು ಅವನಿಗೆ, "ಹೋಗು, ನೀನೂ ಅದರಂತೆಯೇ ಮಾಡು," ಎಂದು ಹೇಳಿದರು.
Essa parábola nos ensina sobre o amor ao próximo, independentemente de raça ou religião. O samaritano ajudou um desconhecido, mostrando que a verdadeira fé se revela no amor ao próximo.
3. A Ovelha Perdida (Lucas 15:4-7)
"ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು, ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’ ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
Deus é como o pastor que busca incessantemente uma ovelha perdida. Essa parábola revela o amor incansável de Deus pelos pecadores, celebrando a alegria no céu quando alguém se arrepende.
4. O Filho Pródigo (Lucas 15:11-32)
ತಪ್ಪಿಹೋದ ಮಗನು
ಇನ್ನೂ ಯೇಸು ಹೇಳಿದ್ದು: "ಒಬ್ಬ ಮನುಷ್ಯನಿಗೆ ಇಬ್ಬರು ಪುತ್ರರಿದ್ದರು. ಅವರಲ್ಲಿ ಕಿರಿಯವನು ತನ್ನ ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು,’ ಎಂದನು. ಆಗ ತಂದೆ ತನ್ನ ಆಸ್ತಿಯನ್ನು ಅವರಿಬ್ಬರಿಗೂ ಪಾಲು ಮಾಡಿಕೊಟ್ಟನು.
"ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು. ಅವನು ಎಲ್ಲವನ್ನೂ ಹಾಳುಮಾಡಿದ ಮೇಲೆ, ಆ ದೇಶದಾದ್ಯಂತ ಘೋರವಾದ ಕ್ಷಾಮವು ಬಂದು, ಕೊರತೆಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿಕೊಂಡನು, ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.
"ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ! ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಸಿಕೊಳ್ಳುವುದಕ್ಕೆ ಯೋಗ್ಯನಲ್ಲ; ನನ್ನನ್ನು ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎನ್ನುವೆನು,’ ಎಂದುಕೊಂಡು, ಎದ್ದು ತನ್ನ ತಂದೆಯ ಬಳಿಗೆ ಹೋದನು.
"ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
"ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.
"ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ. ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ. ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.
"ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ, ಸೇವಕರಲ್ಲಿ ಒಬ್ಬನನ್ನು ಕರೆದು, ‘ಇವುಗಳು ಏನು?’ ಎಂದು ಕೇಳಿದನು. ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.
"ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ. ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.
"ಆಗ ತಂದೆ, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವುದೆಲ್ಲವೂ ನಿನ್ನದೇ. ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ "
A parábola do filho pródigo fala sobre o perdão e o amor incondicional de Deus por Seus filhos, mesmo quando se desviam.
5. A Pérola de Grande Valor (Mateus 13:45-46)
"ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.
Jesus ensina que o Reino de Deus é o bem mais precioso e devemos estar dispostos a renunciar tudo para possuí-lo.
6. O Fariseu e o Publicano (Lucas 18:9-14)
ಫರಿಸಾಯ ಹಾಗೂ ಸುಂಕದವನ ಸಾಮ್ಯ
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು: "ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ. ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.
"ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
"ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು," ಎಂದರು.
Essa parábola nos lembra que Deus valoriza um coração humilde e arrependido, em contraste com a arrogância espiritual. O publicano, ao reconhecer seus pecados, foi justificado diante de Deus.
7. Os Talentos (Mateus 25:14-30)
ಚಿನ್ನದ ನಾಣ್ಯಗಳ ಸಾಮ್ಯ
"ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು. ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
"ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು. ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.
"ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
"ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.
"ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
"ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು. ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು.
"ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,
"ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು. ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.
Nesta história, Jesus ensina sobre a responsabilidade de usar bem os dons e recursos que Deus nos confiou. A fidelidade nas pequenas coisas abre portas para bênçãos maiores.
8. O Rico e Lázaro (Lucas 16:19-31)
ಸಿರಿವಂತನೂ ಬಡ ಲಾಜರನೂ
ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, "ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು. ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು. ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
"ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು. ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.
"ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.
"ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.
"ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.
"ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.
"ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು."
A parábola alerta sobre as consequências de negligenciar os necessitados e viver para si mesmo. Também destaca a realidade do julgamento e da vida após a morte.
9. O Joio e o Trigo (Mateus 13:24-30)
ಕಳೆಯನ್ನು ಕುರಿತು ಸಾಮ್ಯ
ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: "ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು. ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.
"ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.
"ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು.
"ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.
"ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ. ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು."
Essa história simboliza o bem e o mal coexistindo no mundo até o julgamento final, quando Deus fará a separação entre os justos e os ímpios.
10. As Dez Virgens (Mateus 25:1-13)
ಹತ್ತು ಮಂದಿ ಕನ್ಯೆಯರ ಸಾಮ್ಯ
"ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು. ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.
"ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.
"ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು. ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.
"ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.
"ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.
"ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.
"ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.
"ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.
Jesus enfatiza a necessidade de estarmos sempre preparados espiritualmente para Sua segunda vinda, pois ninguém sabe o momento exato.
As parábolas de Jesus continuam sendo fontes ricas de sabedoria e direção para a vida cristã. Ao aplicarmos esses ensinamentos, nos aproximamos mais de Deus e de Sua vontade.
Se este artigo te ajudou, faça sua parte e compartilhe a Palavra de Deus com aqueles que você ama.