Publicidade

Paz

Por Bíblia Online

A paz é um dos frutos do Espírito e uma promessa central de Jesus: 'Deixo-vos a paz, a minha paz vos dou.' A Bíblia nos chama a buscar, cultivar e viver na paz de Deus.

A paz de Cristo

Jesus é o Príncipe da Paz. Antes de partir, prometeu aos discípulos uma paz que o mundo não pode dar nem tirar — paz sobrenatural em meio às tribulações.

ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.

ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.

"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.

"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.

ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,

ಆ ಮಗನನ್ನು ನಮಗಾಗಿ ಕೊಡಲಾಗಿದೆ.

ಆಡಳಿತವು ಅವರ ಬಾಹುವಿನ ಮೇಲಿರುವುದು,

ಅದ್ಭುತವಾದವರು ಸಮಾಲೋಚಕರು,

ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,

ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.

ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, "ನಿಮಗೆ ಸಮಾಧಾನವಾಗಲಿ," ಎಂದರು.

Paz com Deus

Justificados pela fé, temos paz com Deus por meio de Cristo. Ele é a nossa paz, que derrubou a barreira e nos reconciliou.

ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.

ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು. ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.

ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.

ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ:

ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.

ನಮ್ಮ ತಂದೆಯಾದ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.

A paz que excede o entendimento

A paz de Deus, que excede todo entendimento, guarda nosso coração e mente. Ela vem da confiança no Senhor e da entrega total a Ele.

ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.

ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ

ನೆಲೆಗೊಳಿಸಿ ಕಾಯುವೆ,

ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.

ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ

ನೆಲೆಗೊಳಿಸಿ ಕಾಯುವೆ,

ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.

ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.

ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.

Promotores da paz

Bem-aventurados os pacificadores, porque serão chamados filhos de Deus. A Escritura nos chama a buscar e promover a paz em todos os relacionamentos.

ಸಮಾಧಾನ ಪಡಿಸುವವರು ಧನ್ಯರು,

ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಸಮಾಧಾನ ಪಡಿಸುವವರು ಧನ್ಯರು,

ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.

ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.

ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.

"ಬಾಳನ್ನು ಪ್ರೀತಿಸಿ

ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು

ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ

ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ.

ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ.

ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು;

ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು;

ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

O fruto da paz

A sabedoria que vem do alto é pacífica. O fruto da justiça se semeia em paz por aqueles que cultivam a paz com mansidão.

ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.

ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.

ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,

ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು

ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.

ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.

Paz interior e descanso

Aquietai-vos e sabei que Eu sou Deus. A paz do Senhor acalma tempestades, silencia medos e sustenta a alma em todo tempo.

"ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ;

ಜನಾಂಗಗಳಲ್ಲಿ ಉನ್ನತನಾಗಿರುವೆನು;

ಭೂಮಿಯಲ್ಲಿ ಉನ್ನತನಾಗಿರುವೆನು," ಎಂದು ಯೆಹೋವ ದೇವರು ಹೇಳುತ್ತಾರೆ.

ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು,

ಏಕೆಂದರೆ ಯೆಹೋವ ದೇವರೇ,

ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.

ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು;

ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.

ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.

ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.

ನಿರ್ದೋಷಿಯನ್ನು ಗಮನಿಸು;

ಯಥಾರ್ಥನನ್ನು ನೋಡು;

ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.

ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ,

ಅಂಥವರಿಗೆ ಆತಂಕವೇನೂ ಇರುವುದಿಲ್ಲ.

ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ,

ಅಂಥವರಿಗೆ ಆತಂಕವೇನೂ ಇರುವುದಿಲ್ಲ.

ನಾನು ಶಾಂತಿ ಪ್ರಿಯನು;

ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.

ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.

ಯೇಸು ಆ ಸ್ತ್ರೀಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ," ಎಂದು ಹೇಳಿದರು.

"ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ," ಎಂದರು.

Anunciadores da paz

Como são formosos os pés dos que anunciam boas novas de paz! O evangelho é a mensagem de paz para todos os povos.

ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, "ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!" ಎಂದು ಬರೆಯಲಾಗಿದೆ.

ಒಳ್ಳೆಯ ಶುಭಸಮಾಚಾರವನ್ನು ತರುವವನ,

ರಕ್ಷಣೆಯನ್ನು ಪ್ರಕಟಿಸುವವನ

ಚೀಯೋನಿಗೆ ನಿನ್ನ ದೇವರು

ದೊರೆತನ ಮಾಡುತ್ತಾನೆ ಎಂದು ಹೇಳಿ,

ಒಳ್ಳೆಯ ಶುಭಸಮಾಚಾರವನ್ನು ತಂದು,

ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು

ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!

"ಮಹೋನ್ನತದಲ್ಲಿ ದೇವರಿಗೆ ಮಹಿಮೆ,

ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ."

"ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!"

"ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!"

ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು,

ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು.

ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು,

ನಿನ್ನ ಹರಕೆಗಳನ್ನು ಸಲ್ಲಿಸು.

ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು.

ಅವರು ಸಂಪೂರ್ಣವಾಗಿ ನಾಶವಾಗುವರು.

ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

O Deus da paz

Que o Deus da paz esteja com todos vocês. Ele nos santifica por completo e nos guarda irrepreensíveis para a vinda do Senhor.

ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.

ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.

ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.

" ‘ "ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ,

ನಿಮ್ಮನ್ನು ಕಾಪಾಡಲಿ.

ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ,

ನಿಮಗೆ ಕೃಪೆ ತೋರಿಸಲಿ.

ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ,

ನಿಮಗೆ ಸಮಾಧಾನ ಅನುಗ್ರಹಿಸಲಿ." ’

ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.

" ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು.

ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.

ಏಕೆಂದರೆ ನೀವು ಆನಂದದೊಡನೆ ಹೋಗುವಿರಿ,

ಸಮಾಧಾನದಿಂದ ಬರುವಿರಿ.

ಪರ್ವತಗಳು ಮತ್ತು ಗುಡ್ಡಗಳು

ನಿಮ್ಮ ಮುಂದೆ ಹರ್ಷಧ್ವನಿಗೈಯುವವು.

ಹೊಲದ ಮರಗಳೆಲ್ಲಾ

ಚಪ್ಪಾಳೆ ಹೊಡೆಯುವುವು.

"ದುಷ್ಟರಿಗೆ ಸಮಾಧಾನವೇ ಇಲ್ಲ,"

ಎಂದು ನನ್ನ ದೇವರು ಹೇಳುತ್ತಾರೆ.

Paz, santidade e unidade

A paz exige esforço: guardar a unidade do Espírito, evitar contendas e buscar a santidade. Sem paz e santidade, ninguém verá o Senhor.

ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.

ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.

ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.

ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ,

ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.

ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ,

ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು;

ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.

ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.

ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Paz e fé

O Deus da esperança nos encha de paz e alegria no crer. Quem mantém o pensamento firme no Senhor experimenta paz perfeita.

ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.

ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.

ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.

ನಾಶ, ಸಂಕಟಗಳು ಅವರ ಮಾರ್ಗಗಳಲ್ಲಿ ಹಿಂಬಾಲಿಸುತ್ತವೆ.

ಸಮಾಧಾನದ ಮಾರ್ಗವನ್ನೇ ಅವರು ಅರಿಯರು."

"ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ."

ಯೇಸು ಆ ಸ್ತ್ರೀಗೆ, "ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು," ಎಂದರು.

"ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.

ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?

ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

"ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.

ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ

ವಾಸಿಸುವವರಿಗೆ ಪ್ರಕಾಶಿಸಿ,

ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ."

ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.

ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ.

ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.

ಸಮಾಧಾನದ ಮಾರ್ಗವನ್ನೇ ಅವರು ಅರಿಯರು.

ಅವರ ದಾರಿಗಳಲ್ಲಿ ನ್ಯಾಯವಿಲ್ಲ.

ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ.

ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.

ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.

ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.

ನಾಶವು ಬರುತ್ತದೆ.

ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.

ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ." ’

"ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.

ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.

Publicidade
Bíblia Online Bíblia Online

Bíblia Online • Versão: 2026-06-22_10-02-25-