Pecado
O pecado é a realidade que separa a humanidade de Deus. Mas a Bíblia também revela a solução: o sangue de Cristo que nos purifica e a graça que nos liberta de toda condenação.
A universalidade do pecado
Todos pecaram e carecem da glória de Deus. Não há justo, nem sequer um. O pecado entrou no mundo por um homem, mas a graça veio por Jesus.
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.
ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ.
ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ.
ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ.
ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.
ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.
Liberdade da condenação
Não há condenação para os que estão em Cristo Jesus. Ele nos libertou da lei do pecado e da morte para vivermos em novidade de vida.
ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.
ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ. ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ. ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ! ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು. ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ. ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.
ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!
ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ. ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ. ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ. ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ.
ಅದಕ್ಕೆ ಯೇಸು ಉತ್ತರವಾಗಿ, "ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.
Confissão e perdão
Se confessarmos os nossos pecados, Deus é fiel e justo para nos perdoar e purificar de toda injustiça. A confissão liberta a alma.
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ
ನನ್ನನ್ನು ಕರುಣಿಸಿರಿ.
ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ
ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.
ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ,
ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ.
ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ
ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.
ಹುಟ್ಟಿದಂದಿನಿಂದಲೇ ನಾನು ಪಾಪಿ.
ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.
ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ.
ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.
ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು.
ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.
ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ;
ನೀವು ಜಜ್ಜಿದ ಎಲುಬುಗಳು ಆನಂದಪಡಲಿ.
ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ;
ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.
ನನ್ನ ಪಾಪವನ್ನು ನಿಮಗೆ ತಿಳಿಸಿ,
ನನ್ನ ಅನ್ಯಾಯವನ್ನು ಮರೆಮಾಡದೆ,
"ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ
ಅರಿಕೆ ಮಾಡುವೆನು," ಎಂದು ಹೇಳಿದೆನು;
ಆಗ, ನೀವು
ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ,
ಯಾರ ಪಾಪಗಳು ಮುಚ್ಚಲಾಗಿವೆಯೋ
ಅವರೇ ಧನ್ಯರು.
ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ
ನನ್ನನ್ನು ಮನ್ನಿಸಿರಿ.
ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ,
ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.
ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ,
ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ.
ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ
ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.
ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ?
ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
Vencendo o pecado
Cristo nos resgatou e nos restaurou. Devemos mortificar as obras da carne, fugir do pecado e prosseguir em santidade.
ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, "ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು."
ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು," ಎಂದು ಹೇಳಿದನು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.
ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ. ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.
"ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.
Responsabilidade e restauração
O pecado tem consequências, mas Deus restaura o arrependido. Devemos corrigir uns aos outros com mansidão e cobrir o pecado com amor.
ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
"ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.
"ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.
ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
Fuga do pecado
Bem-aventurado o que não anda no conselho dos ímpios. O caminho do justo é guardado pelo Senhor, e sua Palavra nos protege da queda.
ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಿಗಳ ಮಾರ್ಗದಲ್ಲಿ ನಿಲ್ಲದೆ,
ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,
ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ;
ಯಾವ ಪಾಪವಾದರೂ ನನ್ನನ್ನು ಆಳದಿರಲಿ.
ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ;
ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.
ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, "ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ," ಎಂದನು. ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, "ಇಗೋ, ಆ ಮನುಷ್ಯನು ಇವನೇ!" ಎಂದನು.
ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, "ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!" ಎಂದು ಕೂಗಿದರು.
ಅದಕ್ಕೆ ಪಿಲಾತನು ಅವರಿಗೆ, "ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ," ಎಂದನು.
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು," ಎಂದು ಹೇಳಿದರು.
ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು," ಎಂದು ಹೇಳಿದರು.