Perdão e misericórdia
O perdão é o coração do evangelho. Deus nos perdoou em Cristo e nos chama a perdoar uns aos outros, assim como fomos perdoados — sem limites e sem condições.
O perdão de Deus
Deus é rico em misericórdia. Ele apaga nossas transgressões e não se lembra mais dos nossos pecados. Quem confessa, alcança perdão.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
"ನಾನಾಗಿ ನಾನೇ, ನನಗೋಸ್ಕರ
ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ.
ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.
"ನಾನಾಗಿ ನಾನೇ, ನನಗೋಸ್ಕರ
ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ.
ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ,
ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.
ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ.
ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.
ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ.
ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.
ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ.
ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.
ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು
ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ,
ಎಂದು ಕರ್ತದೇವರು ನುಡಿಯುತ್ತಾರೆ."
Perdoar como fomos perdoados
Jesus ensinou que devemos perdoar setenta vezes sete. Se não perdoarmos aos outros, o Pai celestial também não nos perdoará.
ಕರುಣಿಸದ ಸೇವಕನ ಸಾಮ್ಯ
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
ಕರುಣಿಸದ ಸೇವಕನ ಸಾಮ್ಯ
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
ಕರುಣಿಸದ ಸೇವಕನ ಸಾಮ್ಯ
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
"ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು," ಎಂದರು.
ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು. ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು. ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.
ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ,
ನಮ್ಮ ಸಾಲಗಳನ್ನು ಕ್ಷಮಿಸಿರಿ.
ಕರುಣೆಯುಳ್ಳವರು ಧನ್ಯರು,
ಅವರು ಕರುಣೆ ಪಡೆಯುವರು.
A prática do perdão
Perdoar é um ato de obediência e liberdade. A Escritura nos exorta a suportar uns aos outros e perdoar de coração, se alguém tiver algo contra outro.
ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.
ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.
ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು. ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.
Misericórdia e graça
Deus é compassivo e tardio em irar-se. A misericórdia triunfa sobre o juízo, e quem se humilha diante de Deus encontra graça abundante.
ನಿಮ್ಮ ಬಟ್ಟೆಗಳನ್ನಲ್ಲ,
ನಿಮ್ಮ ಹೃದಯಗಳನ್ನು ಹರಿದುಕೊಂಡು,
ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ.
ಅವರು ದಯೆಯೂ ಕರುಣೆಯೂ,
ದೀರ್ಘಶಾಂತಿಯೂ ಮಹಾ ಪ್ರೀತಿಯೂ
ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ,
ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ,
ನಿನ್ನ ಹಾಗೆ ಇರುವ ದೇವರು ಯಾರು?
ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ.
ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.
ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.
ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ.
ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ಹಿಜ್ಕೀಯನು ಪಸ್ಕಹಬ್ಬವನ್ನು ಆಚರಿಸಿದ್ದು
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ,
"ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ," ಎಂದು ಹೇಳಿದರು.
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, "ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ," ಎಂದು ವಿಜ್ಞಾಪನೆ ಮಾಡಿದನು. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
Arrependimento e perdão
O arrependimento genuíno abre as portas do perdão. Deus convida todos ao arrependimento e promete perdoar completamente quem volta a Ele.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
"ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ. ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.
ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.
ನನ್ನ ಪಾಪವನ್ನು ನಿಮಗೆ ತಿಳಿಸಿ,
ನನ್ನ ಅನ್ಯಾಯವನ್ನು ಮರೆಮಾಡದೆ,
"ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ
ಅರಿಕೆ ಮಾಡುವೆನು," ಎಂದು ಹೇಳಿದೆನು;
ಆಗ, ನೀವು
ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
ದುಷ್ಟನು ತನ್ನ ದುರ್ಮಾರ್ಗವನ್ನೂ,
ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು,
ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು.
ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.
ದುಷ್ಟನು ತನ್ನ ದುರ್ಮಾರ್ಗವನ್ನೂ,
ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು,
ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು.
ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.
Perdão nos relacionamentos
Se teu irmão pecar contra ti, repreende-o; se se arrepender, perdoa-lhe. Não guarde ressentimento — liberte-se pelo perdão.
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ.
"ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು. ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು," ಎಂದರು.
ಇತರರನ್ನು ತೀರ್ಪುಮಾಡಬೇಡಿರಿ
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
ಇತರರನ್ನು ತೀರ್ಪುಮಾಡಬೇಡಿರಿ
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
ಇತರರನ್ನು ತೀರ್ಪುಮಾಡಬೇಡಿರಿ
"ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
ಆಗ ಯೇಸು, "ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು," ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.
ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.
ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.
ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು. ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎಂದರು.
" ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ,
ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ;
ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ
ಅಪರಾಧಿಗೆ ಕ್ಷಮಾಪಣೆ
ನಿಮ್ಮಲ್ಲಿ ಯಾರಾದರೂ ನನ್ನನ್ನು ದುಃಖಪಡಿಸಿದರೆ, ಅವನು ನನ್ನನ್ನು ಮಾತ್ರವೇ ದುಃಖ ಪಡಿಸದೆ, ಒಂದು ವಿಧದಲ್ಲಿ ನಿಮ್ಮೆಲ್ಲರನ್ನೂ ದುಃಖಪಡಿಸಿದ್ದಾನೆ. ಅವನ ಮೇಲೆ ಬಹಳ ಕಠಿಣನಾಗಿರಲು ನನಗೆ ಇಷ್ಟವಿಲ್ಲ. ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು. ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು. ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.
ಅದಕ್ಕೆ ಆಕೆಯು, "ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ," ಎಂದಳು.
ಯೇಸು ಆಕೆಗೆ, "ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ," ಎಂದರು. ವಾಕ್ಯ ಸೇರ್ಪಡೆಯಾಗಿರುವುದಿಲ್ಲ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
"ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ,
ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ,
ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ,
ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ?
ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ.
ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು.
ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಮರುಭೂಮಿಯಲ್ಲಿ ಅರಬೀಯನ ಹಾಗೆ
ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ.
ಹೀಗೆ ನಿನ್ನ ವೇಶ್ಯೆತನಗಳಿಂದಲೂ,
ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.
ಆದ್ದರಿಂದ ಮಳೆಗಳು ನಿಂತುಹೋದವು,
ಹಿಂಗಾರೇ ಆಗಲಿಲ್ಲ.
ವೇಶ್ಯೆಯ ನೋಟ ನಿನಗಿತ್ತು.
ನಾಚುವುದನ್ನು ನಿರಾಕರಿಸಿದೆ.
ಈಗಲೂ ನನಗೆ, ‘ನನ್ನ ತಂದೆಯೇ,
ನನ್ನ ಯೌವನದ ಸ್ನೇಹಿತನು ನೀನೇ,’
ಎಂದು ನೀನು ಕರೆಯುತ್ತಿರುವೆ.
ಆತನು ನಿತ್ಯ ಕೋಪಮಾಡುವವನೋ?
ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?
ಇಗೋ, ನೀನು ಹೀಗೆ ಮಾತನಾಡಿದರೇನು?
ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ."
ಅವಿಶ್ವಾಸವುಳ್ಳ ಇಸ್ರಾಯೇಲರು
ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ," ಎಂದು ಯೆಹೋವ ದೇವರು ನುಡಿಯುತ್ತಾರೆ.
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು.
" ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’
ಎಂದು ಯೆಹೋವ ದೇವರು ಕರೆಯುತ್ತಾರೆ.
‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ.
ಏಕೆಂದರೆ ನಾನು ಕರುಣಾಸಾಗರನು,’
ಎಂದು ಯೆಹೋವ ದೇವರು ಹೇಳುತ್ತಾರೆ.
‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.
ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ,
ಒಂದೊಂದು ಹಸುರು ಮರದ ಕೆಳಗೆ
ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ,
ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ
ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ "
ಎಂದು ಯೆಹೋವ ದೇವರು ಹೇಳುತ್ತಾರೆ.
"ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ," ಎಂದು ಯೆಹೋವ ದೇವರು ನುಡಿಯುತ್ತಾರೆ. "ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು. ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ. ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು."
ಯೆಹೋವ ದೇವರು ಹೇಳುವುದೇನೆಂದರೆ:
"ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ,
ನಿನಗೆ ಮನೋಹರವಾದ ನಾಡನ್ನು ಎಂದರೆ,
ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ.
ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ,
ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.
ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ,
ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,"
ಎಂದು ಯೆಹೋವ ದೇವರು ಹೇಳುತ್ತಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು.
ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ.
ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ,
ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.
"ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ;
ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು."
"ಇಗೋ, ನಿಮ್ಮ ಬಳಿಗೆ ಬರುತ್ತೇವೆ,
ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.
ನಿಶ್ಚಯವಾಗಿ ಗುಡ್ಡಗಳಿಂದಲೂ,
ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ.
ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು
ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.
ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ
ನಮ್ಮ ತಂದೆಗಳ ಕಷ್ಟವನ್ನೂ,
ಅವರ ಕುರಿಗಳನ್ನೂ, ಅವರ ದನಗಳನ್ನೂ,
ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ.
ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ.
ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ
ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ
ವಿರೋಧವಾಗಿ ಪಾಪಮಾಡಿದ್ದೇವೆ.
ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ."
ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.