Poder de decisão
Deus nos deu o poder de escolher. A Bíblia mostra que nossas decisões têm consequências eternas e nos chama a escolher sabiamente — a vida, a fé e o caminho de Deus.
A responsabilidade de escolher
Escolhei hoje a quem servireis. Cada decisão molda nosso destino, e Deus nos convida a escolher o caminho da vida e da obediência.
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
ಅದಕ್ಕೆ ಯೆಹೋಶುವನು ಜನರಿಗೆ, "ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ," ಎಂದನು.
ಅದಕ್ಕವರು, "ಹೌದು, ನಾವೇ ಸಾಕ್ಷಿಗಳಾಗಿದ್ದೇವೆ," ಎಂದರು.
"ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ? ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು.
Decisões e consequências
Deus retribuirá a cada um segundo as suas obras. As Escrituras nos alertam que a mornidão espiritual e a resistência ao Espírito têm consequências sérias.
ದೇವರು, "ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು." ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು. ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.
"ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!
ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ: ಏಕೆಂದರೆ,
"ಇನ್ನು ಸ್ವಲ್ಪ ಸಮಯದಲ್ಲಿಯೇ,
ಬರಲಿರುವ ಒಬ್ಬರು ಬಂದೇ ಬರುವರು.
ಅವರು ತಡಮಾಡುವುದಿಲ್ಲ."
ಆದರೆ,
"ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಹಿಂಜರಿದರೆ,
ಅವನಲ್ಲಿ ನನಗೆ ಸಂತೋಷವಿರುವುದಿಲ್ಲ."
ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.
Decisão e fé
Decida com fé, entregue seus planos ao Senhor e aja com determinação. Deus guia os passos de quem se achega a Ele de coração.
ಉಡಿಯಲ್ಲಿ ಚೀಟು ಹಾಕಬಹುದು,
ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.
ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;
ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು.
ಆದಕಾರಣ ನಾನು ಅವಮಾನ ಪಡುವುದಿಲ್ಲ.
ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ.
ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.
ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು. ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.