Proximidade
Deus é próximo dos que o buscam. Ele não é um Deus distante, mas presente, íntimo e acessível a todo o que o invoca com sinceridade de coração.
Buscar a presença de Deus
A Bíblia nos exorta a buscar a face do Senhor continuamente. Quem se aproxima dele encontra plenitude de alegria e delícias perpétuas.
ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;
ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು,
ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ.
ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ
ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
Deus está perto
O Senhor está perto dos que o invocam, dos quebrantados de coração e dos que clamam por socorro. Sua presença nos sustenta.
ಯೆಹೋವನು ನೀತಿವಂತರ ಕೂಗನ್ನು ಕೇಳಿ,
ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
A presença que nunca abandona
Deus promete nunca nos deixar. Ele permanece fiel, está conosco em todo tempo e envia o Espírito para habitar em nossos corações.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು. ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, "ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು. ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ. ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು. ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು. ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು" ಎಂದು ಹೇಳಿದನು.
ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು. ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು. ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು. ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು. ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು. ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು. ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು. ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು. ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು. ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.