Publicidade

Proximidade

Por Bíblia Online

Deus é próximo dos que o buscam. Ele não é um Deus distante, mas presente, íntimo e acessível a todo o que o invoca com sinceridade de coração.

Buscar a presença de Deus

A Bíblia nos exorta a buscar a face do Senhor continuamente. Quem se aproxima dele encontra plenitude de alegria e delícias perpétuas.

ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,

ಅವರ ಮುಖವನ್ನು ಯಾವಾಗಲೂ ಹುಡುಕಿರಿ.

ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,

ಅವರ ಮುಖವನ್ನು ಯಾವಾಗಲೂ ಹುಡುಕಿರಿ.

ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ,

ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.

ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,

ಅದರ ದಯೆಯನ್ನು ನೋಡುತ್ತಾ

ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ

ಇರಬೇಕೆಂಬ ಒಂದೇ ವರವನ್ನು

ಯೆಹೋವ ದೇವರಿಂದ ಕೇಳಿಕೊಂಡು

ಅದನ್ನೇ ಹುಡುಕುತ್ತಿರುವೆನು.

ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು

ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ.

ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ

ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.

ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ.

ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ;

ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.

Deus está perto

O Senhor está perto dos que o invocam, dos quebrantados de coração e dos que clamam por socorro. Sua presença nos sustenta.

ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,

ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.

ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;

ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.

ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.

ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.

ನಿಶ್ಚಯವಾಗಿ ಶುಭವೂ ಪ್ರೀತಿಯೂ

ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ;

ನಾನು ಯೆಹೋವ ದೇವರ ಮನೆಯಲ್ಲಿ

ಸದಾಕಾಲವೂ ವಾಸಿಸುವೆನು.

A presença que nunca abandona

Deus promete nunca nos deixar. Ele permanece fiel, está conosco em todo tempo e envia o Espírito para habitar em nossos corações.

ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.

ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ.

ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.

ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.

ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.

ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.

ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.

ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.

ಆಸನು ಭಕ್ತಿಸಂಜೀವನವನ್ನು ತಂದದ್ದು

ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ, ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, "ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು. ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು. ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು. ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು. ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು," ಎಂದನು.

ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.

ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.

ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು. ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು. ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು. ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು. ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.

ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು. ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು. ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.

ಆಸನ ಆಳ್ವಿಕೆಯಲ್ಲಿ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿಲ್ಲದೆ ಇತ್ತು.

Publicidade
Bíblia Online Bíblia Online

Bíblia Online • Versão: 2026-06-22_10-02-25-