Raiva
A raiva é uma emoção humana que a Bíblia trata com seriedade. Irar-se não é pecado em si, mas a ira descontrolada destrói relacionamentos e abre porta para o mal.
Controlar a ira
A Bíblia nos exorta a ser tardios para irar-se. A resposta branda desvia o furor, e o que se controla é mais forte que um guerreiro.
ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು,
ಬಿರುನುಡಿಯು ಸಿಟ್ಟನ್ನೇರಿಸುವುದು.
ದೀರ್ಘಶಾಂತನು ಕೇವಲ ಬುದ್ಧಿವಂತನು,
ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು,
ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು,
ಜಾಣನು ಅವಮಾನವನ್ನು ಮರೆಮಾಡುವನು.
Irar-se sem pecar
Paulo ensina: irai-vos, mas não pequeis. Não deixe o sol se pôr sobre a vossa ira, para não dar lugar ao diabo.
"ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು,
ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
ಹೆಮ್ಮೆಯ ಫಲವು ಕಲಹವೇ,
ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
Amor e perdão acima da raiva
O amor cobre multidão de pecados. A Bíblia nos chama a não alimentar rancor, mas a perdoar e amar, vencendo a raiva com compaixão.
ದ್ವೇಷವು ಜಗಳಗಳನ್ನೆಬ್ಬಿಸುತ್ತದೆ,
ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
"‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
"‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
ಆತನು ಮತ್ತೆ ಹೇಳಿದ್ದೇನೆಂದರೆ, "ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ."
ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
ಇಸ್ರಾಯೇಲಿನ ವಿಶ್ವಾಸಘಾತ
ಯೆಹೋವನು ಹೀಗೆನ್ನುತ್ತಾನೆ, "ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?
ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;
ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.
‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ." ಎಂಬುದೇ.
ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು
ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ. ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು. ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು. ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು. ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ" ಎಂಬುದೇ ಯೆಹೋವನಾದ ನನ್ನ ನುಡಿ.
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, "ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ. ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು" ಇದು ಯೆಹೋವನ ನುಡಿ.
ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.
ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು
"ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ" ಎಂದು ಯೆಹೋವನು ನುಡಿಯುತ್ತಾನೆ.
ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
"ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು" ಎಂದು ಯೆಹೋವನು ನುಡಿಯುತ್ತಾನೆ.
ಅದಕ್ಕೆ ಜನರು, "ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ
ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ.
ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ" ಎಂದು ಮೊರೆಯಿಡುತ್ತಾರೆ.