Raiva
A raiva é uma emoção humana que a Bíblia trata com seriedade. Irar-se não é pecado em si, mas a ira descontrolada destrói relacionamentos e abre porta para o mal.
Controlar a ira
A Bíblia nos exorta a ser tardios para irar-se. A resposta branda desvia o furor, e o que se controla é mais forte que um guerreiro.
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ.
ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
ತಾಳ್ಮೆಯುಳ್ಳವನು ಬಹು ವಿವೇಕಿ,
ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.
ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು.
ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು,
ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.
Irar-se sem pecar
Paulo ensina: irai-vos, mas não pequeis. Não deixe o sol se pôr sobre a vossa ira, para não dar lugar ao diabo.
"ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.
ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು;
ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.
ಎಲ್ಲಿ ಗರ್ವವೋ ಅಲ್ಲಿ ಕಲಹ;
ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
Amor e perdão acima da raiva
O amor cobre multidão de pecados. A Bíblia nos chama a não alimentar rancor, mas a perdoar e amar, vencendo a raiva com compaixão.
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ;
ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,
" ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
" ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
ಯೇಸು ಮುಂದುವರಿದು, "ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ," ಎಂದರು.
ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.
"ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ,
ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ,
ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ,
ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ?
ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ.
ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು.
ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಮರುಭೂಮಿಯಲ್ಲಿ ಅರಬೀಯನ ಹಾಗೆ
ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ.
ಹೀಗೆ ನಿನ್ನ ವೇಶ್ಯೆತನಗಳಿಂದಲೂ,
ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.
ಆದ್ದರಿಂದ ಮಳೆಗಳು ನಿಂತುಹೋದವು,
ಹಿಂಗಾರೇ ಆಗಲಿಲ್ಲ.
ವೇಶ್ಯೆಯ ನೋಟ ನಿನಗಿತ್ತು.
ನಾಚುವುದನ್ನು ನಿರಾಕರಿಸಿದೆ.
ಈಗಲೂ ನನಗೆ, ‘ನನ್ನ ತಂದೆಯೇ,
ನನ್ನ ಯೌವನದ ಸ್ನೇಹಿತನು ನೀನೇ,’
ಎಂದು ನೀನು ಕರೆಯುತ್ತಿರುವೆ.
ಆತನು ನಿತ್ಯ ಕೋಪಮಾಡುವವನೋ?
ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?
ಇಗೋ, ನೀನು ಹೀಗೆ ಮಾತನಾಡಿದರೇನು?
ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ."
ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ," ಎಂದು ಯೆಹೋವ ದೇವರು ನುಡಿಯುತ್ತಾರೆ.
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: "ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು.
" ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’
ಎಂದು ಯೆಹೋವ ದೇವರು ಕರೆಯುತ್ತಾರೆ.
‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ.
ಏಕೆಂದರೆ ನಾನು ಕರುಣಾಸಾಗರನು,’
ಎಂದು ಯೆಹೋವ ದೇವರು ಹೇಳುತ್ತಾರೆ.
‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.
ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ,
ಒಂದೊಂದು ಹಸುರು ಮರದ ಕೆಳಗೆ
ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ,
ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ
ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ "
ಎಂದು ಯೆಹೋವ ದೇವರು ಹೇಳುತ್ತಾರೆ.
"ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ," ಎಂದು ಯೆಹೋವ ದೇವರು ನುಡಿಯುತ್ತಾರೆ. "ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು. ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ. ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು."
ಯೆಹೋವ ದೇವರು ಹೇಳುವುದೇನೆಂದರೆ:
"ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ,
ನಿನಗೆ ಮನೋಹರವಾದ ನಾಡನ್ನು ಎಂದರೆ,
ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ.
ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ,
ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.
ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ,
ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,"
ಎಂದು ಯೆಹೋವ ದೇವರು ಹೇಳುತ್ತಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು.
ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ.
ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ,
ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.
"ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ;
ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು."
"ಇಗೋ, ನಿಮ್ಮ ಬಳಿಗೆ ಬರುತ್ತೇವೆ,
ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.
ನಿಶ್ಚಯವಾಗಿ ಗುಡ್ಡಗಳಿಂದಲೂ,
ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ.
ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು
ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.
ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ
ನಮ್ಮ ತಂದೆಗಳ ಕಷ್ಟವನ್ನೂ,
ಅವರ ಕುರಿಗಳನ್ನೂ, ಅವರ ದನಗಳನ್ನೂ,
ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ.
ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ.
ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ
ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ
ವಿರೋಧವಾಗಿ ಪಾಪಮಾಡಿದ್ದೇವೆ.
ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ."