Ressurreição
A ressurreição é o pilar da fé cristã. Se Cristo não ressuscitou, é vã a nossa fé. Mas Ele venceu a morte, e essa é a garantia da nossa própria ressurreição.
Cristo ressuscitou
O túmulo está vazio! Os anjos declararam: 'Ele não está aqui; ressuscitou!' A ressurreição de Cristo é o fato mais transformador da história.
ಆಗ ದೂತನು ಆ ಹೆಂಗಸರಿಗೆ, "ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
ಅವನು ಅವರಿಗೆ, "ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ" ಎಂದು ಹೇಳಿದನು.
ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
Ressurreição e vida eterna
Jesus disse: 'Eu sou a ressurreição e a vida.' Quem crê nele viverá, mesmo que morra. A morte foi derrotada na cruz e no túmulo vazio.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?" ಎಂದು ಕೇಳಿದಕ್ಕೆ,
ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
Nossa esperança futura
A ressurreição de Cristo garante nossa esperança viva. O Deus de paz trouxe dos mortos o grande Pastor das ovelhas para nossa salvação.
ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು" ಎಂಬುದೇ.
"ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು" ಎಂದು ಹೇಳಿದನು.