Sabedoria
A sabedoria é um dos temas mais ricos da Bíblia. O temor do Senhor é seu princípio, e buscá-la vale mais que ouro ou prata. Deus promete dar sabedoria generosamente a quem pedir com fé.
O princípio da sabedoria
O temor do Senhor é o início de toda sabedoria verdadeira. Quem reverencia a Deus aprende a viver com discernimento e prudência.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು,
ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,
ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
ಯೆಹೋವನ ಭಯವೇ ಜ್ಞಾನೋಪದೇಶ,
ಗೌರವಕ್ಕೆ ಮೊದಲು ವಿನಯ.
ಯೆಹೋವನ ಭಯವೇ ಜ್ಞಾನಕ್ಕೆ ಮೂಲ;
ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
ಆತನ ಸ್ತುತಿಯು ನಿರಂತರವಾದದ್ದು.
ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
ಅದರ ಕ್ರಯವು ಯಾರಿಗೂ ಗೊತ್ತಿಲ್ಲ,
ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು,
ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.
ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ,
ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.
ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ,
ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.
ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ?
ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ.
ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ,
ಶುದ್ಧ ಕನಕದೊಡನೆ ಅದನ್ನು ತೂಗಲಾಗದು.
ಹೀಗಿರಲು ಜ್ಞಾನವು ಎಲ್ಲಿಂದ ಬರುವುದು?
ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ,
ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
ನಾಶನವೂ, ಮೃತ್ಯುವೂ,
‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.
Sabedoria como dom de Deus
A verdadeira sabedoria vem do alto. Deus a concede generosamente a quem pede com fé, sem lançar em rosto a fraqueza humana.
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಯೆಹೋವನೇ ಜ್ಞಾನವನ್ನು ಕೊಡುವಾತನು,
ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
ಯೆಹೋವನೇ ಜ್ಞಾನವನ್ನು ಕೊಡುವಾತನು,
ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
ಆಗ ನೀನು ಯೆಹೋವನ ಭಯವನ್ನು ಅರಿತು,
ದೈವಜ್ಞಾನವನ್ನು ಪಡೆದುಕೊಳ್ಳುವಿ.
ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ,
ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ;
ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ" ಎಂದನು.
"ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ!
ಜ್ಞಾನ ತ್ರಾಣಗಳು ಆತನವುಗಳೇ.
ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
A sabedoria do alto
A sabedoria que vem de Deus é pura, pacífica, amável, cheia de misericórdia e de bons frutos. Ela se opõe à sabedoria terrena e mundana.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ. ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ "ಮೂರ್ಖನಾಗಲಿ"
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ "ಮೂರ್ಖನಾಗಲಿ"
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
Direção e discernimento
Deus guia os humildes na justiça e ensina seu caminho aos mansos. Ele promete dirigir nossos passos quando confiamos nele de todo o coração.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಯೆಹೋವನು, "ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು" ಎಂದು ಅನ್ನುತ್ತಾನಲ್ಲಾ.
ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು;
ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು;
ನೀನು ಒಪ್ಪುವ ದಾರಿಯನ್ನು ತೋರಿಸು.
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;
ನೀನೇ ನನ್ನನ್ನು ರಕ್ಷಿಸುವ ದೇವರು;
ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,
ನನ್ನ ದೇವರು ನೀನಲ್ಲವೋ?
ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;
ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
A Palavra como fonte de sabedoria
A Palavra de Deus é lâmpada para os pés e luz para o caminho. Meditar nas Escrituras nos dá entendimento superior ao dos mestres.
ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,
ನನ್ನ ದಾರಿಗೆ ಬೆಳಕೂ ಆಗಿದೆ.
ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,
ನನ್ನ ದಾರಿಗೆ ಬೆಳಕೂ ಆಗಿದೆ.
ನನ್ನ ಕಣ್ಣುಗಳನ್ನು ತೆರೆ,
ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,
ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು,
ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು,
ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
Sabedoria prática para o dia a dia
A sabedoria se aplica em cada decisão: nas finanças, nos relacionamentos, no trabalho e no uso do tempo. Vivamos como sábios, não como insensatos.
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು,
ಮುಂದೆ ಜ್ಞಾನಿಯಾಗುವಿ.
ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು,
ಮುಂದೆ ಜ್ಞಾನಿಯಾಗುವಿ.
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು,
ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು,
ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು,
ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
ದೀರ್ಘಶಾಂತನು ಕೇವಲ ಬುದ್ಧಿವಂತನು,
ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಹೆಮ್ಮೆಯ ಫಲವು ಕಲಹವೇ,
ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ,
ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ,
ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ,
ದೀನತೆಯಲ್ಲಿ ಸುಜ್ಞಾನ.
ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು,
ಹರಟೆಯ ಮೂರ್ಖನು ಕೆಡವಲ್ಪಡುವನು.
ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು,
ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
ಮೂಢನಿಗೆ ವಿವೇಕವು ಅನಿಷ್ಟ;
ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ,
ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು,
ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
O valor da sabedoria
A sabedoria é mais preciosa que rubis. Quem a encontra, encontra a vida e alcança o favor do Senhor. Nada se compara a ela.
ಜ್ಞಾನವನ್ನು ಪಡೆಯುವವನು ಧನ್ಯನು,
ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
ಯಾವನು ನನ್ನನ್ನು ಹೊಂದುತ್ತಾನೋ
ಅವನು ಜೀವವನ್ನು ಹೊಂದುತ್ತಾನೆ;
ಅವನು ಯೆಹೋವನ ದಯೆಗೆ ಗುರಿಯಾಗುವನು.
ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು,
ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಹೃದಯದ ಸಂಕಲ್ಪವು ಮನುಷ್ಯನ ವಶವು,
ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಧನವು ಹೇಗೊ ಹಾಗೆ ಜ್ಞಾನವು ಆಶ್ರಯ.
ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ.
ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
A sabedoria e a soberania de Deus
Os caminhos de Deus são mais altos que os nossos. Sua sabedoria é insondável, eterna e infinitamente superior ao entendimento humano.
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
ಯೆಹೋವನು ಹೀಗೆನ್ನುತ್ತಾನೆ, "ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?
ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?
ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ!
ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ.
ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು.
ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,
ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ,
ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ಆತನು ಯೆಹೋವನ ಭಯದಲ್ಲಿ ಆನಂದಿಸುವನು.
ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ,
ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು;
ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ.
ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ;
ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ,
ಆತನ ಜ್ಞಾನವು ಅಪರಿಮಿತವಾಗಿದೆ.
ನಿನ್ನ ಚಿತ್ತವನ್ನು ತಿಳಿಯಪಡಿಸಿ,
ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,
ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ನೀನು ಯೆಹೋವನಲ್ಲಿ ಸಂತೋಷಿಸು;
ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ
ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು;
ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು.
ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು.
ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು.
ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
ನಾಳೆ ಎಂದು ಕೊಚ್ಚಿಕೊಳ್ಳಬೇಡ,
ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
ಕೆಟ್ಟವರು ನ್ಯಾಯವನ್ನು ಗ್ರಹಿಸರು,
ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.
ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. "ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು," ಎಂದು ಲಿಖಿತವಾಗಿದೆ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
"ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ."
ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
"ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ" ಎಂದನು.
ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ,
ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
ಜ್ಞಾನವು ವೃದ್ಧರಲ್ಲೇ ಅಡಗಿದೆಯೋ?
ದಿರ್ಘಾಷ್ಯರಲ್ಲಿ ವಿವೇಕವಿದೆ.
ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು,
ಆಲೋಚನೆಯೂ, ವಿವೇಕವೂ ಆತನವೇ.
ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು,
"ನೀನು ಹೇಳಿದ್ದು ಸತ್ಯವೇ ಸರಿ.
ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?
ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ,
ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.
ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು.
ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಅವನು ಅವರಿಗೆ, "ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.