Sacrifício
O sacrifício é o coração do evangelho. Jesus entregou tudo por nós na cruz, e somos chamados a oferecer nossas vidas como sacrifício vivo, agradável a Deus.
O sacrifício supremo de Cristo
Jesus deu a própria vida como resgate por muitos. Seu sacrifício na cruz é o ato supremo de amor de toda a história — o Justo morrendo pelos injustos.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
"ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು. ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು," ಎಂದು ಹೇಳಿದರು.
ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು. ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, "ಯೆಹೂದ್ಯರ ಅರಸನೇ, ನಮಸ್ಕಾರ!" ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.
ಯೇಸು ಮಹಾಧ್ವನಿಯಿಂದ, "ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ," ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.
O cordeiro sem defeito
Cristo nos resgatou com seu sangue precioso, como cordeiro sem defeito. Ele se ofereceu uma vez por todas para tirar os pecados do mundo.
ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ. ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು, ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.
ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.
ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.
Nosso sacrifício em resposta
Movidos pelo amor de Cristo, somos chamados a oferecer nossas vidas, nossos bens e nosso serviço como sacrifício vivo. Deus se agrada da entrega generosa.
ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
ನಿನ್ನ ಆಸ್ತಿಯಿಂದಲೂ
ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು
ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ," ಎಂದು ಹೇಳಿದರು.
ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು.
ನಾನು ಮಾಡಿದ ಹರಕೆಯನ್ನು ತೀರಿಸುವೆನು.
ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು."
ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
"ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ," ಎಂದರು.
ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.