Santa ceia
A Santa Ceia é uma das ordenanças mais sagradas da igreja cristã. Instituída por Jesus na última noite antes da crucificação, ela celebra seu sacrifício e proclama sua morte até que Ele volte.
A instituição por Jesus
Na noite em que foi traído, Jesus tomou o pão e o cálice, deu graças e os compartilhou com os discípulos, dizendo: 'Fazei isto em memória de mim.'
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, "ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ" ಅಂದನು. ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, "ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ, ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ "ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ" ಎಂದನು. ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. ಯೇಸು ಅವರಿಗೆ, "ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ. ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ" ಎಂದನು.
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, "ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ" ಅಂದನು. ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, "ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
O significado espiritual
A Ceia é participação no corpo e no sangue de Cristo. Jesus ensinou que quem come de sua carne e bebe de seu sangue tem a vida eterna.
ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು" ಎಂದು ಹೇಳಿದನು.
ಅದಕ್ಕೆ ಯೇಸು ಅವರಿಗೆ, "ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು" ಎಂದು ಹೇಳಿದನು.
"ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ" ಅಂದನು. ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, "ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ" ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
A prática da Igreja
Desde os primeiros cristãos, a Ceia do Senhor é parte fundamental da vida comunitária da Igreja, celebrada com reverência e exame de consciência.
ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ. ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.