Santidade
A santidade é o chamado supremo de Deus para o seu povo. 'Sede santos, porque eu sou santo' — essa ordem ressoa por toda a Escritura, convidando-nos a uma vida separada para Deus.
O chamado à santidade
Deus nos escolheu antes da fundação do mundo para sermos santos. A santificação é sua vontade expressa e nosso destino em Cristo.
ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, "ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು," ಎಂದು ಪವಿತ್ರ ವೇದದಲ್ಲಿ ಬರೆದಿದೆ.
ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, "ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು," ಎಂದು ಪವಿತ್ರ ವೇದದಲ್ಲಿ ಬರೆದಿದೆ.
ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.
ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.
O Deus santo
O Senhor é santo em toda a sua natureza. O universo testemunha sua santidade, e os anjos proclamam: Santo, Santo, Santo.
ನೀವು ಪರಿಶುದ್ಧರು;
ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.
"ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ.
ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ.
ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.
ಏಕೆಂದರೆ ಉನ್ನತನೂ, ಮಹೋನ್ನತನೂ,
ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ:
"ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ,
ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ.
ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ
ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.
ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’
ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
A prática da santidade
A santidade se expressa em pensamentos puros, ações corretas e separação do pecado. É um processo contínuo de purificação e dedicação a Deus.
ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.
ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.
ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು; ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.
ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ. ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ. ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.
A Palavra que santifica
Jesus disse: 'Santifica-os na verdade; a tua palavra é a verdade.' A Bíblia é o instrumento de Deus para nos purificar e transformar.
ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?
ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ;
ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ,
ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.
ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.
Templo do Espírito Santo
Nosso corpo é templo de Deus. Devemos honrá-lo com santidade, guardando mente e coração e buscando a semelhança com Cristo.
ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?
ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ, ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ. ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:
ಅವರು ದೇವರ ಸ್ವರೂಪವಾಗಿದ್ದರೂ,
ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ತಮ್ಮನ್ನು ತಾವೇ ಬರಿದುಮಾಡಿಕೊಂಡು
ಗುಲಾಮನ ರೂಪವನ್ನು ಧರಿಸಿಕೊಂಡು
ಮನುಷ್ಯರಿಗೆ ಸಮನಾದರು.
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ
ತಮ್ಮನ್ನು ತಾವೇ ತಗ್ಗಿಸಿಕೊಂಡು
ಮರಣವನ್ನು ಎಂದರೆ ಶಿಲುಬೆಯ
ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ
ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ," ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ. ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು. ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ. ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ. ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.
ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ. ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ. ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು. ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ. ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.
ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.
"ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ನೀವು ಬದುಕುವ ಹಾಗೆ
ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ.
ಆಗ ನೀವು ಹೇಳಿಕೊಳ್ಳುವಂತೆ
ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು.
ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.
ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು
ಆಮೇಲೆ ವಿಚಾರಿಸುವುದು ಉರುಲಾಗಿದೆ.
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.
" ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ.
ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ.
ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.
ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,
ವಿಧವೆಯರಿಗೆ ರಕ್ಷಕರಾಗಿದ್ದಾರೆ.