Separação
A separação traz dor profunda, mas a Bíblia nos consola com a promessa de que Deus nunca nos abandona. Seja na perda, na distância ou no luto, Ele é nosso refúgio.
Deus está presente na dor
O Senhor está perto dos quebrantados de coração e promete nunca nos deixar órfãos. Na separação, Ele é nosso consolo mais íntimo.
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.
ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ,
ಯೆಹೋವ ದೇವರು ನನ್ನನ್ನು ಸೇರಿಸಿಕೊಳ್ಳುವರು.
Esperança e conforto
A separação não é o fim. Deus transforma a dor em esperança, e o sofrimento presente produz uma glória eterna que supera toda aflição.
ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.
ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:
ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.
Amor que persevera
O amor verdadeiro é mais forte que a separação. A fé nos sustenta e nos dá a certeza de que o reencontro virá.
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು.
ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು.
ಒಬ್ಬನು ತನ್ನ ಆಸ್ತಿಯನ್ನೆಲ್ಲಾ
ಪ್ರೀತಿಗೋಸ್ಕರ ಕೊಟ್ಟರೂ,
ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.
ಸ್ನೇಹಿತರು
ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, "ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.
ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು. ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು," ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.
ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ. ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.