Sofrimento
O sofrimento é uma realidade da vida neste mundo, mas a Bíblia revela que Deus está presente em toda dor, produzindo caráter, esperança e redenção através das tribulações.
O sofrimento de Cristo
Jesus sofreu por nós, carregando nossas dores e enfermidades. Ele é o modelo supremo de como enfrentar o sofrimento com fé e obediência.
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, "ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ" ಎಂದು ಆತನನ್ನು ಪರಿಹಾಸ್ಯಮಾಡಿ
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
O propósito do sofrimento
Deus usa as tribulações para produzir perseverança, caráter e esperança. O sofrimento presente não se compara com a glória que será revelada.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
Consolação e companhia
Deus consola os aflitos para que possamos consolar outros. Nunca estamos sozinhos no sofrimento — Ele é o Pai das misericórdias.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Fé em meio à dor
Os grandes homens e mulheres de fé sofreram e perseveraram. O sofrimento nos aproxima de Deus e nos leva a entender seu coração.
ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, "ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ" ಎಂದು ಹೇಳಿದನು.
ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು;
ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.
ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು" ಎಂಬುದೇ.
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.