Sofrimento
O sofrimento é uma realidade da vida neste mundo, mas a Bíblia revela que Deus está presente em toda dor, produzindo caráter, esperança e redenção através das tribulações.
O sofrimento de Cristo
Jesus sofreu por nós, carregando nossas dores e enfermidades. Ele é o modelo supremo de como enfrentar o sofrimento com fé e obediência.
ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ,
ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು.
ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು.
ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು. ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, "ಯೆಹೂದ್ಯರ ಅರಸನೇ, ನಮಸ್ಕಾರ!" ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.
ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.
ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.
O propósito do sofrimento
Deus usa as tribulações para produzir perseverança, caráter e esperança. O sofrimento presente não se compara com a glória que será revelada.
ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.
ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.
ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.
ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.
ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.
Consolação e companhia
Deus consola os aflitos para que possamos consolar outros. Nunca estamos sozinhos no sofrimento — Ele é o Pai das misericórdias.
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.
ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ;
ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.
Fé em meio à dor
Os grandes homens e mulheres de fé sofreram e perseveraram. O sofrimento nos aproxima de Deus e nos leva a entender seu coração.
ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,
ಹೀಗೆ ಹೇಳಿದನು: "ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು,
ಬೆತ್ತಲೆಯಾಗಿ ಗತಿಸಿ ಹೋಗುವೆನು.
ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು;
ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ."
"ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು;
ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.
ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.
ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.
ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ. ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ," ಎಂದನು.
ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.