Trabalho
O trabalho é uma ordenança divina desde a criação. Deus colocou o homem no jardim para cultivar e guardar, revelando que o labor é parte do propósito humano e um meio de glorificá-lo.
Trabalho como vocação divina
Deus nos criou para trabalhar com propósito. O trabalho é expressão da imagem divina em nós e deve ser feito como para o Senhor.
ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.
ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.
ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ. ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.
ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
Diligência e recompensa
A mão diligente enriquece, mas a preguiça traz pobreza. A Bíblia valoriza o esforço honesto, dedicado e perseverante em toda obra.
ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು;
ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
ಚುರುಕು ಕೈಯುಳ್ಳವನು ಆಳುವನು;
ಸೋಮಾರಿಗಳು ಗುಲಾಮರಾಗುವರು.
ಚುರುಕು ಕೈಯುಳ್ಳವನು ಆಳುವನು;
ಸೋಮಾರಿಗಳು ಗುಲಾಮರಾಗುವರು.
ಎಲ್ಲಾ ಪ್ರಯಾಸದಲ್ಲಿ ಲಾಭವಿದೆ,
ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.
ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ,
ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.
ನಾಯಕನಾಗಲೀ, ಮೇಲ್ವಿಚಾರಕನಾಗಲೀ,
ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,
ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ.
ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.
ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು?
ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ,
ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?
ಹೀಗೆ ನಿನಗೆ ಬಡತನವು ಕಳ್ಳನಂತೆಯೂ
ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.
ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು,
ಕೆಡುಕನಿಗೆ ಸಹೋದರನಾಗಿದ್ದಾನೆ.
ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ;
ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!
ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;
ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು;
ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.
Planejamento e excelência
A excelência no trabalho honra a Deus. Devemos nos dedicar com competência, entregar nossos planos ao Senhor e buscar o melhor em cada tarefa.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ?
ಅವನು ನೀಚರ ಮುಂದೆ ಅಲ್ಲ,
ಅರಸರ ಮುಂದೆಯೇ ಸೇವೆ ಸಲ್ಲಿಸುವನು.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ," ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.
O contentamento no trabalho
Deus nos dá a capacidade de desfrutar do nosso trabalho. Poder comer, beber e encontrar satisfação em nosso labor é um dom divino.
ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು. ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.
ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು.
ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ.
ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ.
ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ.
ಅವನು, "ನಾನು ಸುಖಸಂತೋಷವನ್ನು ತೊರೆದು,
ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?" ಎಂದುಕೊಂಡನು.
ಇದು ಕೂಡ ವ್ಯರ್ಥವೇ,
ಪ್ರಯಾಸದ ಕೆಲಸವೇ ಸರಿ.
ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.
A responsabilidade cristã
O cristão deve trabalhar com suas próprias mãos, viver dignamente e ser exemplo de dedicação. Quem não trabalha, não coma.
ನಾವು ನಿಮ್ಮ ಸಂಗಡ ಇದ್ದಾಗ, "ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು," ಎಂದು ನಿಮಗೆ ಆಜ್ಞಾಪಿಸಿದ್ದೆವು.
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ. ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.
ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.
ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.
ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ.
ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ.
ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?
ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.
ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.