Vida
A vida é um dom precioso de Deus. Desde a concepção até a eternidade, as Escrituras revelam o propósito, o valor e a plenitude da vida que o Senhor nos oferece.
Deus, o autor da vida
O Senhor é quem dá a vida e a sustenta. Cada ser humano foi formado por suas mãos com propósito e intenção divina.
ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;
ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ,
ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ
ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು;
ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ
ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು;
ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.
ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು.
ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.
A vida em Cristo
Jesus é o caminho, a verdade e a vida. Nele encontramos sentido, plenitude e a promessa de vida abundante e eterna.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?" ಎಂದು ಕೇಳಿದ್ದಕ್ಕೆ,
ಯೇಸು ಅವರಿಗೆ, "ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು," ಎಂದು ಕೂಗಿ ಹೇಳಿದರು.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
Vivendo com sabedoria
A Bíblia nos orienta a viver com sabedoria, aproveitando bem o tempo, guardando o coração e buscando a vontade de Deus para cada dia.
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ,
ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.
ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು,
ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ;
ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;
ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು;
ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.
ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ.
ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.
ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು
ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.
ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ. ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.
A vida no dia a dia
Cada dia é uma oportunidade de glorificar a Deus. A Escritura nos chama a viver com propósito, confiança e fé prática.
ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ;
ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.
ನಿಶ್ಚಯವಾಗಿ ಶುಭವೂ ಪ್ರೀತಿಯೂ
ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ;
ನಾನು ಯೆಹೋವ ದೇವರ ಮನೆಯಲ್ಲಿ
ಸದಾಕಾಲವೂ ವಾಸಿಸುವೆನು.
ನನ್ನ ತನುಮನಗಳು ಕುಂದುತ್ತವೆ;
ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ,
ನನ್ನ ಪಾಲೂ ಆಗಿದ್ದಾರೆ.
ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು,
ನಿಮ್ಮ ಪ್ರಾಣವನ್ನೂ ಕಾಪಾಡುವರು.
ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ
ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.
ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ;
ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,
ಅದರ ದಯೆಯನ್ನು ನೋಡುತ್ತಾ
ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ
ಇರಬೇಕೆಂಬ ಒಂದೇ ವರವನ್ನು
ಯೆಹೋವ ದೇವರಿಂದ ಕೇಳಿಕೊಂಡು
ಅದನ್ನೇ ಹುಡುಕುತ್ತಿರುವೆನು.
ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ,
ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.
Prioridades e eternidade
Jesus nos lembra que a vida é mais que comida e o corpo mais que roupa. O que importa é buscar o Reino de Deus e viver para a eternidade.
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ? ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ? ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?
ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, "ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು. ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು," ಎಂದು ಹೇಳಿದರು.
ಅನಂತರ ಯೇಸು ಜನರಿಗೆ, "ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ," ಎಂದರು.
ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ.
ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.
ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ. ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.
ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.
"ಬಾಳನ್ನು ಪ್ರೀತಿಸಿ
ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು
ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ
ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ.
ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.
ಯೆಹೋವ ದೇವರಿಗೆ ಸ್ತೋತ್ರ!
ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ,
ಬಲದಿಂದಿದ್ದರೆ ಎಂಬತ್ತು ವರ್ಷ.
ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ.
ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.
"ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ
ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ,
ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ.
ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ.
ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ;
ಪ್ರತಿ ಮನುಷ್ಯನ ಜೀವನ
ಬರೀ ಉಸಿರೇ.
"ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ;
ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ;
ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.
ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು
ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು,
ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು;
ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ನರೆಗೂದಲು ಉಜ್ವಲ ಕಿರೀಟ,
ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು
ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.