A volta de Jesus
A volta de Jesus é uma das maiores promessas da Bíblia. Cristo prometeu que retornará em glória, e os cristãos vivem na expectativa desse dia triunfante.
A promessa do retorno
Jesus prometeu aos discípulos que voltaria. Os anjos confirmaram essa promessa na ascensão, e os apóstolos ensinaram que Ele virá com poder.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ. ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು, "ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು," ಎಂದು ಹೇಳಿದರು.
ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, "ಹೌದು, ನಾನು ಬೇಗ ಬರುತ್ತೇನೆ!" ಎಂದು ಹೇಳುತ್ತಾರೆ.
ಆಮೆನ್. ಕರ್ತ ಯೇಸುವೇ ಬಾ.
ಆಗ ಕರ್ತ ಯೇಸು, "ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.
Os sinais e o momento
Ninguém sabe o dia nem a hora. Jesus alertou sobre falsos sinais e nos chamou à vigilância constante, pois Ele virá como ladrão na noite.
"ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು. ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
"ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ. ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ. ಆದರೆ, "ಸಮಾಧಾನ, ಸುರಕ್ಷಿತ," ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.
"ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ. ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ! ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.
A glória da segunda vinda
Cristo voltará nas nuvens, com poder e grande glória. Os mortos em Cristo ressuscitarão, e os vivos serão arrebatados para encontrá-lo nos ares.
ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.
"ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ,
" ‘ಸೂರ್ಯನಿಗೆ ಕತ್ತಲು ಮುಸುಕುವುದು;
ಚಂದ್ರನು ಕಾಂತಿಹೀನನಾಗುವನು.
ಆಕಾಶದಿಂದ ನಕ್ಷತ್ರಗಳು ಬೀಳುವವು
ಮತ್ತು ಆಕಾಶದ ಶಕ್ತಿಗಳು ಕದಲುವವು.’
"ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು. ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.
"ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು. ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು. ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ. ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ. ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು. ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. "ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು." ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲಣ ವಸ್ತ್ರದಲ್ಲಿ:
ರಾಜಾಧಿರಾಜನೂ ಕರ್ತರ ಕರ್ತನೂ.
ಎಂಬ ಹೆಸರು ಬರೆದಿದೆ.
ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
Vivendo na expectativa
A certeza do retorno de Cristo nos chama a viver em santidade, aguardando novos céus e nova terra onde habita a justiça.
ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ. ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.