36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, "ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು. 37 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು" ಎಂದು ಪ್ರಾರ್ಥಿಸಿದನು.