41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. 42 ಅನಂತರ ಯೋನಾತಾನನು ದಾವೀದನಿಗೆ, "ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ" ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.