21 ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, "ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ" ಎಂಬುದಾಗಿ ಆಜ್ಞಾಪಿಸಿದನು. 22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
Publicidade