ಎಲೀಷನು ನೀರಿನಲ್ಲಿದ್ದ ದೋಷವನ್ನು ಪರಿಹರಿಸಿದ್ದು
19 ಯೆರಿಕೋವಿನ ಜನರು ಎಲೀಷನಿಗೆ, "ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ" ಎಂದು ಹೇಳಿದರು. 20 ಆಗ ಎಲೀಷನು ಅವರಿಗೆ, "ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ" ಎಂದು ಹೇಳಿದಾಗ, ಅವರು ತಂದುಕೊಟ್ಟರು.
21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, "ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ" ಎಂದು ಹೇಳಿದನು. 22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.