32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,
"ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು;
ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ
ಆತನು ಬಾಯಿ ತೆರೆಯದೆ ಮೌನವಾಗಿದ್ದನು.
33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ.
ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು?
ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ" ಎಂಬುದೇ.
34 ಕಂಚುಕಿಯು ಈ ವಚನವನ್ನು ಕುರಿತು, "ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?" ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು 35 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.