17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು. 18 ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
19 ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.