17 ಅನಂತರ ಆ ಪುರುಷನಿಗೆ, "ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
19 ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ" ಎಂದು ಹೇಳಿದನು.