21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. 22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. 23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. 24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. 25 ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28 ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ 5:28 ದಾನಿ. 12:2; ಪ್ರಕ 20:4,5,12,13:ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
30 "ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. 31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.