ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
22 ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, "ಸಮುದ್ರದ ಆಚೇ ದಡಕ್ಕೆ ಹೋಗೋಣ" ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. 23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. 24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು, "ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ" ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. 25 ತರುವಾಯ ಆತನು, "ನಿಮ್ಮ ನಂಬಿಕೆ ಎಲ್ಲಿ?" ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, "ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?" ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.