38 ಆಗ ಆ ಗುಂಪಿನಲ್ಲಿದ್ದ ಒಬ್ಬನು, "ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. 39 ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ. 40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು" ಎಂದು ಹೇಳಿದನು. 41 ಅದಕ್ಕೆ ಯೇಸು, "ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?" ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ "ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ" ಅಂದನು. 42 ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು. 43 ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು.
ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,