ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. 47 ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, "ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು" ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. 48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, "ದಾವೀದನ ಕುಮಾರನೇ ನನ್ನನ್ನು ಕರುಣಿಸು" ಎಂದು ಮತ್ತಷ್ಟು ಕೂಗಿಕೊಂಡನು. 49 ಆಗ ಯೇಸು ನಿಂತು, "ಅವನನ್ನು ಕರೆಯಿರಿ" ಅನ್ನಲು ಅವರು ಆ ಕುರುಡನನ್ನು ಕರೆದು, "ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ" ಅಂದರು. 50 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. 51 ಯೇಸು ಅವನನ್ನು, "ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ" ಎಂದು ಕೇಳಲು ಆ ಕುರುಡನು, "ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು" ಅಂದನು. 52 ಯೇಸು ಅವನಿಗೆ, "ಹೋಗು, 10:52 ಮಾರ್ಕ 5:34; ಲೂಕ 7:50; 17:19; ಅ. ಕೃ. 14:9:ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.