ನಿಸ್ಸಂದೇಹವಾದ ನಂಬಿಕೆ
20 ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. 21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, "ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ" ಎಂದು ಹೇಳಿದ್ದಕ್ಕೆ 22 ಯೇಸು ಹೇಳಿದ್ದೇನಂದರೆ, "ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24 ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು" ಅಂದನು.