ಗೋದಿ ಮತ್ತು ಕಳೆಗಳ ಸಾಮ್ಯ
24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, "ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. 25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. 26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. 27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು. 28 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. 29 ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, 13:30 ಮತ್ತಾ 3:12:ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’" ಅಂದನು.