36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು. 37 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, "ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು. 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ 13:38 ಮತ್ತಾ 13:43; 8:12; ಮಾರ್ಕ 16:15; ಕೊಲೊ 1:6:ರಾಜ್ಯದ ಮಕ್ಕಳು. 39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. 40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. 41 13:41 ಮತ್ತಾ 18:7; 24:31. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.