ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
21 ಅಂದಿನಿಂದ 16:21 ಕೆಲವು ಪ್ರತಿಗಳಲ್ಲಿ ಯೇಸು ಕ್ರಿಸ್ತನೆಂಬ ಪದವಿದೆ. ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.