63 "ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು; 64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ" ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.