10 ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ. 11 ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.
Publicidade