6 ಸ್ವಲ್ಪವಾಗಿ ಬಿತ್ತುವವನು ಸ್ವಲ್ಪವಾಗಿ ಕೊಯ್ಯುವನು, ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. 7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ. 8 ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ. 9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ,
"ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು;
ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು."9:9 ಕೀರ್ತನೆ 112:9
10 ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು. 11 ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.
12 ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.