15 ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.