9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.
10 ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು,
"ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು.
ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು.
ಹಗಲಿರುಳು ನಮ್ಮ ಸಹೋದರರ ಮೇಲೆ,
ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.