32 ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು:
"ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು.
ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು.
ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.
33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು.
ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ,
ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?"8:33 ಯೆಶಾಯ 53:7,8
34 ನಂತರ ಕಂಚುಕಿಯು, "ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು," ಎಂದು ಫಿಲಿಪ್ಪನನ್ನು ಕೇಳಿದನು. 35 ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.