17 ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
18 ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. 19 ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.