ಯುಗ ಸಮಾಪ್ತಿ
1 "ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು. 2 ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. 3 ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.