28 ನೆಬೂಕದ್ನೆಚ್ಚರನು ಮಾತನಾಡಿ, "ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು. 29 ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ," ಎಂದನು.