30 "ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. 31 ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ? 32 ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
Publicidade