14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.