1 ಬಾಯಾರಿದ ಸಕಲ ಜನರೇ,
ನೀರಿನ ಬಳಿಗೆ ಬನ್ನಿರಿ,
ಹಣವಿಲ್ಲದವನೂ ಬರಲಿ.
ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ.
ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ
ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.
2 ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ?
ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ?
ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ.
ನೀವು ಮೃಷ್ಟಾನ್ನದಲ್ಲಿ ಆನಂದಿಸಿ!
3 ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ,
ಆಲಿಸಿದರೆ ಬದುಕಿ ಬಾಳುವಿರಿ.
ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು
ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
4 ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ,
ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.
5 ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ,
ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ
ನೀನು ತಿಳಿಯದ ಜನಾಂಗಗಳನ್ನು ಕರೆಯುವೆ,
ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು
ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.
6 ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ,
ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.