6 ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ಆ ಮಗನನ್ನು ನಮಗಾಗಿ ಕೊಡಲಾಗಿದೆ.
ಆಡಳಿತವು ಅವರ ಬಾಹುವಿನ ಮೇಲಿರುವುದು,
ಅದ್ಭುತವಾದವರು ಸಮಾಲೋಚಕರು,
ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ,
ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ
ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು,
ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ
ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು,
ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು
ಇದನ್ನು ನೆರವೇರಿಸುವುದು.